ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 851 ಪ್ರಕರಣ ಪತ್ತೆ; 15 ಸಾವು, 4 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!

7th Sep 2021 07:39 PM

ADVERTISEMENT

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 851 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,56,988ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 15 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,441ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ. 

ಈ ದಿನದ ಪ್ರಮುಖ ಸುದ್ದಿಗಳ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇಂದು 248 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,39,972ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.

ADVERTISEMENT

ರಾಜ್ಯದಲ್ಲಿ ಇಂದು 790 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,02,089ಕ್ಕೆ ಏರಿಕೆಯಾಗಿದೆ. ಇನ್ನು17,432 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 1,18,791 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 851 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.71ಕ್ಕೆ ಇಳಿದಿದೆ.

ರಾಜ್ಯದ ನಾಲ್ಕು ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Tags : Covid 19 Coronavirus Karnataka Covid Cases Bengaluru Corona Cases ಕೋವಿಡ್ 19 ಕೊರೋನಾ ವೈರಸ್ ಕರ್ನಾಟಕ ಕೋವಿಡ್ ಪ್ರಕರಣ ಬೆಂಗಳೂರು ಕೊರೋನಾ ಪ್ರಕರಣ
ADVERTISEMENT

MORE FROM THE SECTION

ADVERTISEMENT