ರಾಜಕೀಯ

ಜಾತಿವಾರು ಜನಗಣತಿಯಲ್ಲಿ ಯಾವುದೇ ಗೊಂದಲಗಳಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ

8th Sep 2021 07:51 AM

ADVERTISEMENT

ಬೆಂಗಳೂರು: ಜಾತಿವಾರು ಜನಗಣತಿ ವರದಿ ಕುರಿತು ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಮಂಗಳವಾರ ಹೇಳಿದ್ದಾರೆ. 

ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆರ್ಥಿಕ ಕಾರಣದಿಂದ ಹಣ ಬಿಡುಗಡೆಗೆ ಸಮಸ್ಯೆ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜನಗಣತಿ ಮಾಡಿಸಿದ್ದರು. ಹಿಂದುಳಿದವರ ಪರ ಸಿದ್ದರಾಮಯ್ಯರವರು ಧ್ವನಿ ಎತ್ತಿದ್ರು. ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಅವರ ಅವಧಿಯಲ್ಲಿ ಅದನ್ನು ಏಕೆ ಬಿಡುಗಡೆ ಮಾಡಿಲ್ಲವೆಂಬುದುಗೊತ್ತಿಲ್ಲ. ಆಯೋಗದ ಅಧ್ಯಕ್ಷ ಹೆಚ್ಚಿನ ಸಮಯ ಬೇಕೆಂದು ಕೇಳಿದ್ದಾರೆ. ವರದಿ ಕೊಟ್ಟ ಬಳಿಕ ಸಂಪುಟ ಸಭೆಯಲ್ಲಿ ಚರ್ಚೆ ಮಾಡ್ತೇವೆ ಎಂದು ಹೇಳಿದ್ದಾರೆ.

ವರದಿ ಕುರಿತು ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಮತ್ತು ಈ ಹಿಂದೆ ಇದ್ದ ಯಾವುದೇ ಗೊಂದಲಕ್ಕೆ ನಾವು ಜವಾಬ್ದಾರರಲ್ಲ. ಪರಿಶಿಷ್ಟ ಜಾತಿಯ ಸುಮಾರು 1.27 ಕೋಟಿ ಜನರಿಗೆ ಎಲ್ಲಾ ಮೂಲಭೂತ ಸೌಕರ್ಯಗಳು, ಮನೆ, ಕುಡಿಯುವ ನೀರು, ವಿದ್ಯುತ್ ಮತ್ತು ಆಸ್ತಿ ದಾಖಲೆಗಳನ್ನು ಒದಗಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ. 

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, ಆಯೋಗದ ಸದಸ್ಯರು, ಕಾರ್ಯದರ್ಶಿಗಳು ವರದಿಗೆ ಸಹಿ ಹಾಕಿಲ್ಲ. ವರದಿಯನ್ನು ಪರಿಶೀಲಿಸಲು ಅವರಿಗೂ ಕಾಲಾವಕಾಶ ಬೇಕಿದೆ ಎಂದು ಹೇಳಿದ್ದಾರೆ. 

ADVERTISEMENT

ಮೊದಲು ಆಯೋಗದ ಕಾರ್ಯದರ್ಶಿಗಳು ಪರಿಶೀಲಿಸಿ ಸಹಿ ಹಾಕಿದ ಬಳಿಕ ಅದನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ನಂತರ ಸಂಪುಟ ಸಭೆಯಲ್ಲಿ ಈ ವರದಿ ಪ್ರಸ್ತಾಪಿಸಿ ಅನುಮೋದನೆ ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

Tags : castecensus Kota Srinivas Poojary Karnataka ಜಾತಿವಾರು ಜನಗಣತಿ ಕೋಟಾ ಶ್ರೀನಿವಾಸ ಪೂಜಾರಿ ಕರ್ನಾಟಕ
ADVERTISEMENT

MORE FROM THE SECTION

ADVERTISEMENT